ದೇವರನಾಮ: ಆವ ಸಿರಿಯಲಿ

ರಚನೆ: ಶ್ರೀ ಕನಕ ದಾಸರು

ರಾಗ: ಕಾನಾಡ

ತಾಳ: ಆಟ

 

ಆವಸಿರ್ಯಲಿ ನೀನು ಎನ್ನ ಮರೆತೆ?

ದೇವ ಜಾನಕಿರಮಣ ಪೇಳು ರಘುಹ್ಪತಿಯೆ            ||ಪ||

 

ಸುರರ ಸೆರೆಯನು ಬಿಡಿಸಿ ಬಂದೆನೆಂಬ ಸಿರಿಯೆ?

ಶರಧಿ ಸೇತುವೆಯ ಕಟ್ಟಿದೆನೆನ್ನುವ ಸಿರಿಯೆ

ಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ            ||೧|

 

ಕಡಲೊಳಗೆ ಮನೆ ಮಾಡಿ ಮಲಗಿದೆನೆಂಬ ಸಿರಿಯೆ ?

ಮೃದ ನಿನ್ನ ಸಖನಾದನೆಂಬ ಸಿರಿಯೆ

ಬಿಡದೆ ದ್ರೌಪದಿ ಮಾನ ಕಾಯ್ದೆನೆಂಬ ಸಿರಿಯೆ

ದೃಢ ವಾಗಿ ಹೇಳೆನಗೆ ದೇವಕಿ ಸುತನೆ            ||೨||

 

ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆ

ಕಾಮ ನಿನ್ನ ಸುತನಾದ ನೆಂಬ ಸಿರಿಯೆ

ಆ ಮಹಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆ

ಪ್ರೇಮದಲಿ ಹೇಳೆನಗೆ ಸ್ವಾಮಿ ಅಚ್ಯುತನೆ            ||೩||

 

ಮನುಜರೆಲ್ಲ್ರು ನಿನ್ನ ಸುತ್ತಿಸುವರೆಂಬ ಸಿರಿಯೆ

ಹನುಮ ನಿನ್ನ ಬಂಟನಾದನೆಂಬ ಸಿರಿಯೆ

ಬಿನುಗುದೈವಗಳು ನಿನಗೆಣ್ಯಿಲ್ಲವೆಂಬ ಸಿರಿಯೆ

ಅನುಮಾನ ಮಾಡದೆ ಪೇಳೊ ನರಹರಿಯೆ            ||೪||

 

ಇಂತು ಸಿರಿಯಲಿ ನೀನು ಎನ್ನ ಮರೆತರೆ ಸ್ವಾಮಿ

ಪಂಥವೆ ನಿನಗಿದು ಆವ ನಡತೆ?

ಕಂತುಪಿತ ಕಾಗಿನೆಲೆಯದಿಕೇಶವ ರಂಗ

ಚಿಂತೆಯನು ಬಿಡಿಸಿ ಸಂತೋಷಪಡಿಸೊ            ||೫||